ದೀಪಾವಳಿ ಆಚರಣೆಯ ಮಹತ್ವ
ಎರಡು ಪೌರಾಣಿಕ ಘಟನೆಗಳು ಮುಖ್ಯವಾಗಿ ದೀಪಾವಳಿಯೊಂದಿಗೆ ಸಂಬಂಧಿತವಾಗಿವೆ:
- ಶ್ರೀ ರಾಮ ರಾವಣನನ್ನು ಗೆದ್ದು ಸೀತೆ ಮತ್ತು ಲಕ್ಷ್ಮಣರೊಂದಿಗೆ ಅಯೋಧ್ಯೆಗೆ ಮರಳಿದ ಸಮಯವೆಂದು ದೀಪಾವಳಿಯನ್ನು ಕೆಲವರು ಆಚರಿಸುತ್ತಾರೆ
- ಅಮಾವಾಸ್ಯೆಯ ಹಿಂದಿನ ದಿನ (ಚತುರ್ದಶಿ) ಶ್ರೀ ಕೃಷ್ಣ ನರಕಾಸುರನನ್ನು ಸಂಹರಿಸಿದ ದಿನ ಎಂದು ಹೇಳಲಾಗುತ್ತದೆ
- .ಸಿಕ್ಖ್ ಧರ್ಮದಲ್ಲಿಯೂ ದೀಪಾವಳಿ ಮುಖ್ಯ ಹಬ್ಬ. ೧೬೨೦ ರಲ್ಲಿ ಸಿಕ್ಖರ ಆರನೆಯ ಗುರು ಹರಗೋಬಿಂದ್ ಸಿಂಗ್ ಗ್ವಾಲಿಯರ್ನ ಕೋಟೆಯಲ್ಲಿ ಬಂಧಿತರಾಗಿದ್ದ ೫೨ ರಾಜರನ್ನು ಬಿಡಿಸಿ ತಂದ ದಿನವೆಂದು ಈ ಕಾಲವನ್ನು ಆಚರಿಸಲಾಗುತ್ತದೆ.
- ದೀಪಾವಯು ಜೈನ ಧರ್ಮದಲ್ಲಿ ಕಡೆಯ ತೀರ್ಥಂಕರ ಮಹಾವೀರರು ಕಾರ್ತಿಕ ಚತುರ್ದಶಿಯಂದು (ಕ್ರಿ.ಪೂ ೫೨೭ ಅಕ್ಟೋಬರ್ ೧೫) ಪಾವಾಪುರಿಯಲ್ಲಿ ಮೋಕ್ಷ ಹೊಂದಿದ ದಿನವಾಗಿ ಆಚರಿಸಲ್ಪಡುತ್ತದೆ.
- ಬಲಿ-ವಾಮನರ ಕಥೆ ಮತ್ತು ಬಲಿಯ ತ್ಯಾಗವನ್ನು ಅಮಾವಾಸ್ಯೆಯ ಮರು ದಿನ ಬಲಿಪಾಡ್ಯಮಿಯಾಗಿ ಆಚರಿಸಲಾಗುತ್ತದ
- ತಮಸೋಮಾ ಜ್ಯೋತಿರ್ಗಮಯ . ಚಿಣ್ಣರ ಮನದ ದೀಪ ಪ್ರಜ್ವಲಿಸಲಿ.
No comments:
Post a Comment